ಭಾನುವಾರ, ಮಾರ್ಚ್ 15, 2009

ಜೋಗಿ ಸರ್ ಬರೆದ 'ಕ್ಷಮಿಸಿ'ಗೆ ಪ್ರತಿಕ್ರಿಯೆ


ಪಾಠ ಕಲಿಸುವ ಸಮಯ...
ಜೋಗಿ ಸರ್, ಬಲು ಜೋರು ಬರೆದಿದ್ದೀರಿ. ಇನ್ನೂ ನಾವೆಲ್ಲಾ ಒಂದಾಗಿ ಈ ಸನಾತನಿ ಸುಡೋ ಹಿಂದೂವಾದಿಗಳಿಗೆ ತಕ್ಕ ಪಾಠ ಕಲಿಸುವ ಸಮಯ ಬಂದಿದೆ. ಕಲಾವಿದ, ಸಾಹಿತಿ, ಹೋರಾಟಗಾರ, ಪತ್ರಕರ್ತರನ್ನು ಅಷ್ಟಾಗಿಯೂ ಜನಸಾಮಾನ್ಯರು ಅವನ ಜಾತಿಯಿಂದ ಗುರುತಿಸಲು ಇಷ್ಟಪಡಲಾರರು. ಅದರಲ್ಲೂ ಲೆಜೆಂಡ್ಗಳನ್ನು ಅದ್ಹೇಗೆ ಜಾತಿ, ಜನಾಂಗ, ಬಣ್ಣ, ಪ್ರದೇಶ, ಧರ್ಮ, ದೇಶ ಎಂದು ಗುರುತಿಸಲಾದೀತು. ಈ ಮೂರ್ಖರು ಕೇವಲ ದಕ್ಷಿಣ ಕನ್ನಡದಲ್ಲಷ್ಟೆ ಅಲ್ಲ; ಅಂಥವರನ್ನು ಪೋಷಿಸುವ ಪಕ್ಷ, ಸಕರ್ಾರಗಳೇ ಇರುವಾಗ ಇವರು ಇಲ್ಲದ ಜಾಗೆಯಿಲ್ಲ. ಕೆಲವೇ ದಿನಗಳಲ್ಲಿ ಮಹಾನ್ ರಾಷ್ಟ್ರ ನಾಯಕರ ಸಾಲಿನಲ್ಲಿ ಯಡಿಯೂರಪ್ಪ, ಅಡ್ವಾಣಿ, ವಾಜಪೇಯಿ, ಮೋದಿ, ಬಾಳಠಾಕ್ರೆ, ಮುತಾಲಿಕ್, ತೊಗಾಡಿಯಾ ಸೇರಿದಂತೆ ಸಂಘ ಪರಿವಾರದ ಮುಖಂಡರ ಫೋಟೊಗಳನ್ನು ಎಲ್ಲಾ ಸಕರ್ಾರಿ ಮತ್ತು ಸಾರ್ವಜನಿಕ ಕೇಂದ್ರ ಹಾಗೂ ಕಚೇರಿಗಳಲ್ಲಿ ಕಡ್ಡಾಯವಾಗಿ ಜೋತುಬೀಳಿಸಬೇಕು ಎಂಬ ಆರ್ಡರ್ ಬಂದರೂ ಅಚ್ಚರಿಪಡಬೇಕಿಲ್ಲ. ನಿಮ್ಮ ನೇರ, ಇರಿಯುವ ಬರೆಹದಿಂದ ನಮ್ಮೆಲ್ಲರಲ್ಲೂ ಚೈತನ್ಯ ತುಂಬಿದೆ. ಕೇವಲ ಬರೆಹದ ಮೂಲಕ ಸಾವಿರ ಪುಟಗಳಲ್ಲಿ ಬರೆದರೂ ಇಂಥಹ ಮೂಢರ ಮನಸ್ಸು ಬದಲಾದೀತು ಎಂದು ಬಯಸುವುದೂ ತಪ್ಪು. ಸಾಧ್ಯವಿದ್ದರೆ ನಾವೆಲ್ಲರೂ ಬೀದಿಗಿಳಿದು ಸನಾತನಿಗಳ ಕಿವಿಹಿಂಡುವ ಕಾಲ ಸನ್ನಿಹಿತವಾಗಿದೆ. ಇಲ್ಲದಿದ್ದರೆ ಕೇವಲ ಹೇಮಂತ ಹೆಗಡೆಗೆ ಕೇಳಿದ ಪ್ರಶ್ನೆ ನಮ್ಮ ಪ್ರತಿ ಮಾತಿಗೂ, ಅಕ್ಷರ, ಸೀನು, ಉಗುಳು ಏನೆಲ್ಲಾ ಕ್ರಿಯೆಗಳಿಗೂ ಅನ್ವಯಿಸಿದರೂ ಅಚ್ಚರಿಪಡಬೇಕಿಲ್ಲ. ನೋಡಿ, ಆಕ್ಟಿವಿಸ್ಟ್ ರೀತಿಯಲ್ಲಿ ಕೆಲಸ ಮಾಡಿದರೆ ಮಾತ್ರ ಏನಾದರೂ ಸಾಧ್ಯವಾದೀತು. ಇಲ್ಲವಾದರೆ ನಮ್ಮನ್ನೆಲ್ಲಾ ಏನೋ ಬರೆತಾವೆ... ಬೊಗಳ್ತಾವೆ... ನಮಗೇನೂ ಆಗಲ್ಲ ಎಂದು ಉಗುಳಿದರೂ ಮುಖ ಒರೆಸಿಕೊಳ್ಳುವ ಭಂಡರು ಭಾವಿಸುವುದರಲ್ಲಿ ಅನುಮಾನವಿಲ್ಲ. ಅನ್ನಿಸಿದ್ದನ್ನೆಲ್ಲಾ ಬರೆದುಬಿಟ್ಟೆ...
-ಕಲಿಗಣನಾಥ ಗುಡದೂರು